ಶ್ರೀ ಕ್ಷೇತ್ರ ಉಕ್ಕಡಗಾತ್ರಿಯು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿಯಲ್ಲಿ ಇರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದೆ. ಈ ಕ್ಷೇತ್ರವು ಕರಿ ಬಸವೇಶ್ವರ ಅಜ್ಜಯ್ಯ ದೇವರಿಗೆ ಸಮರ್ಪಿತವಾದ ದೇವಾಲಯವಾಗಿದೆ. ಈ ದೇವಾಲಯವು ತುಂಗಭದ್ರಾ ನದಿಯ ತಟದಲ್ಲಿದ್ದು, ರಾಜ್ಯದ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ.
ಶ್ರೀ ಕ್ಷೇತ್ರ ಉಕ್ಕಡಗಾತ್ರಿಯ ದೂರಗಳು
- ಬೆಂಗಳೂರು – 300 ಕಿ.ಮೀ
- ದಾವಣಗೆರೆ – 45 ಕಿ.ಮೀ
- ಹರಿಹರ – 27 ಕಿ.ಮೀ
- ಹರಿಹರ ರೈಲ್ವೆ ನಿಲ್ದಾಣ – 27 ಕಿ.ಮೀ
ಇಲ್ಲಿಗೆ ಭೇಟಿ ನೀಡಿದರೆ ಜೀವನದ ಕಷ್ಟಗಳು ನಿವಾರಣೆಯಾಗುತ್ತವೆ ಎಂಬ ಭಕ್ತರ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಅಜ್ಜಯ್ಯ ಸ್ವಾಮಿಯ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಇಲ್ಲಿ ಭೇಟಿ ನೀಡುತ್ತಾರೆ. ಅಲ್ಲದೆ, ಇಲ್ಲಿಗೆ ಭೇಟಿ ನೀಡುವುದರಿಂದ ದೆವ್ವ-ಭೂತಗಳ ಕಾಟದಿಂದಲೂ ಮುಕ್ತಿ ದೊರೆಯುತ್ತದೆ ಎಂಬ ನಂಬಿಕೆ ಭಕ್ತರಲ್ಲಿ ಮನೆಮಾಡಿದೆ.
ಉಕ್ಕಡಗಾತ್ರಿ ಕ್ಷೇತ್ರವು ರಾಜ್ಯ ಮಾತ್ರವಲ್ಲದೆ ಹೊರರಾಜ್ಯಗಳ ಭಕ್ತರನ್ನೂ ಆಕರ್ಷಿಸುತ್ತದೆ. ಪ್ರತಿವರ್ಷ ಸುಮಾರು 15 ಲಕ್ಷಕ್ಕೂ ಹೆಚ್ಚು ಭಕ್ತರು ಈ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಉಕ್ಕಡಗಾತ್ರಿ ಅಜ್ಜಯ್ಯ ಸ್ವಾಮಿಯ ದರ್ಶನ ಪಡೆದರೆ ತಮ್ಮ ಕಷ್ಟಗಳು ದೂರವಾಗುತ್ತವೆ ಎಂಬ ಭರವಸೆಯೊಂದಿಗೆ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಭಕ್ತರ ಅನುಕೂಲಕ್ಕಾಗಿ ಶ್ರೀಕ್ಷೇತ್ರದಲ್ಲಿ ಅಗತ್ಯವಿರುವ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಭೇಟಿ ನೀಡಿ



