ಸೌಮ್ಯಕೇಶವ ದೇವಾಲಯ ನಾಗಮಂಗಲ

ಸೌಮ್ಯಕೇಶವ ದೇವಾಲಯವು ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿರುವ ಪ್ರಸಿದ್ಧ ಪುರಾತನ ವಿಷ್ಣು ದೇವಾಲಯವಾಗಿದೆ. ಈ ದೇವಾಲಯವನ್ನು ಹೊಯ್ಸಳ ಹಾಗೂ ವಿಜಯನಗರ ಅರಸರ ಕಾಲದಲ್ಲಿ ಹಂತ ಹಂತವಾಗಿ ನಿರ್ಮಿಸಲಾಗಿದೆ. ದೇವಾಲಯವು ಗೋಪುರ, ಗರ್ಭಗೃಹ, ಪ್ರದಕ್ಷಿಣಾಪಥ ಹಾಗೂ ಪಾತಾಳ ಅಂಕಣವನ್ನು ಒಳಗೊಂಡಿದೆ.

ಈ ದೇವಾಲಯದ ಶಿಖರವು ಕರ್ನಾಟಕದಲ್ಲಿನ ಅತ್ಯಂತ ಎತ್ತರದ ಶಿಖರಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಇದರ ಭವ್ಯ ಗೋಪುರವನ್ನು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ನಿರ್ಮಿಸಲಾಗಿದೆ.

ನಕ್ಷತ್ರಾಕಾರದ ಜಗತಿಯ ಮೇಲೆ ನಿರ್ಮಿಸಲಾದ ಈ ದೇವಾಲಯವು ತ್ರಿಕೂಟಾಚಲ ಶೈಲಿಯ ವಿನ್ಯಾಸವನ್ನು ಹೊಂದಿದ್ದು, ಇಲ್ಲಿ ಕ್ಷೇತ್ರದ ಪ್ರಧಾನ ದೇವರಾಗಿ ಸೌಮ್ಯಕೇಶವನು ಆರಾಧಿಸಲ್ಪಡುತ್ತಾನೆ.

ನಾಗಮಂಗಲ ಸೌಮ್ಯಕೇಶವ ದೇವಾಲಯದ ದೂರಗಳು

  • ಬೆಂಗಳೂರು – 118 ಕಿ.ಮೀ
  • ಮಂಡ್ಯ – 42 ಕಿ.ಮೀ
  • ನಾಗಮಂಗಲ – 1 ಕಿ.ಮೀ
  • ಮಂಡ್ಯ ರೈಲ್ವೆ ನಿಲ್ದಾಣ – 43 ಕಿ.ಮೀ

ಇಲ್ಲಿನ ಕೇಶವನ ವಿಗ್ರಹವು ಸೌಮ್ಯವಾದ ಮುಖಭಾವವನ್ನು ಹೊಂದಿರುವುದರಿಂದ, ಇಲ್ಲಿ ನೆಲೆಸಿರುವ ಪರಮಾತ್ಮನನ್ನು ‘ಸೌಮ್ಯಕೇಶವ’ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಇತರ ಕೇಶವ ದೇವಾಲಯಗಳಲ್ಲಿ ಸ್ವಾಮಿಯು ಬಲಗೈಯಲ್ಲಿ ಚಕ್ರ ಹಾಗೂ ಎಡಗೈಯಲ್ಲಿ ಶಂಖವನ್ನು ಹಿಡಿದು ಭಕ್ತರಿಗೆ ದರ್ಶನ ನೀಡುತ್ತಾನೆ.

ಆದರೆ ಈ ದೇವಾಲಯದಲ್ಲಿ ಸ್ವಾಮಿಯು ಬಲಗೈಯಲ್ಲಿ ಶಂಖ ಹಾಗೂ ಎಡಗೈಯಲ್ಲಿ ಚಕ್ರವನ್ನು ಹಿಡಿದು, ಶ್ರೀದೇವಿ ಮತ್ತು ಭೂದೇವಿಯರ ಸಮೇತ ನಿಂತ ಭಂಗಿಯಲ್ಲಿ ಭಕ್ತರಿಗೆ ದರ್ಶನ ನೀಡುವುದು ವಿಶೇಷವಾದ ವೈಶಿಷ್ಟ್ಯವಾಗಿದೆ.

ಭೇಟಿ ನೀಡಿ
ನಾಗಮಂಗಲ ಇತರೆ ಪ್ರವಾಸಿ ಸ್ಥಳಗಳು


Responsive Services Section

ಭೇಟಿ ನೀಡಿ
ಮಂಡ್ಯ ಜಿಲ್ಲೆ ಇತರೆ ತಾಲೂಕು ಪ್ರವಾಸಿ ಸ್ಥಳಗಳು


Responsive Services Section