ಶ್ರವಣಬೆಳಗೊಳ

ಶ್ರವಣಬೆಳಗೊಳವು ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ, ಪ್ರವಾಸಿ ತಾಣವಾಗಿದೆ. ಇಲ್ಲಿ ವಿಶ್ವವಿಖ್ಯಾತ 58 ಅಡಿ ಎತ್ತರದ ಏಕಶಿಲ ಬಾಹುಬಲಿಯ ಪ್ರತಿಮೆ ಇದೆ. ಈ ಏಕಶಿಲ ಬಾಹುಬಲಿಯ ಮೂರ್ತಿಯನ್ನು ನಾಲ್ಕನೇ ರಾಚಮಲ್ಲನ ಮಂತ್ರಿಯಾಗಿದ್ದ ಚಾವುಂಡರಯ ಇದನ್ನು ನಿರ್ಮಿಸಿದನು. ಇದು ಜೈನ ಧಾರ್ಮಿಕ ಕೇಂದ್ರವಾಗಿದೆ. ಚಾವುಂಡರಯರು “ಚಾವುಂಡರಾಯ ಪುರಾಣ” ರಚಿಸಿದನು.

ಶ್ರವಣಬೆಳಗೊಳವು ಬೆಂಗಳೂರಿನಿಂದ 167.4 ಕಿಲೋಮೀಟರ್ ದೂರದಲ್ಲಿದೆ ಮತ್ತು ಹಾಸನದಿಂದ 53.1 ಕಿಲೋಮೀಟರ್ ದೂರದಲ್ಲಿದೆ. ಹಾಗು ಚನ್ನರಾಯಪಟ್ಟಣ ದಿಂದ 12 ಕಿ.ಮೀ ದೂರದಲ್ಲಿದೆ.

ಏಷ್ಯ ಖಂಡದಲ್ಲಿಯೇ ಅತಿ ಎತ್ತರದ ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಶಿಲೆಯಿರುವ ಶ್ರವಣಬೆಳಗೊಳ ಪ್ರಸಿದ್ಧ ಜೈನ ಪುಣ್ಯಕ್ಷೇತ್ರ. ವಿಂಧ್ಯಗಿರಿಯ ಮೇಲೆ ಕಡೆಯಲಾಗಿರುವ ಈ ಮೂರ್ತಿಯನ್ನು ಚಾವುಂಡರಾಯನು ಬೃಹದಾಕಾರದ ವಿಗ್ರಹವನ್ನು ಕ್ರಿ.ಶ 981 ರಲ್ಲಿ ಕೆತ್ತಿಸಿದನು. ಪ್ರತಿ 12 ವರ್ಷಕ್ಕೊಮ್ಮೆ ಇಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ.

ಭೇಟಿ ನೀಡಿ
ಹಾಸನ ಜಿಲ್ಲೆ ಇತರೆ ತಾಲೂಕು ಪ್ರವಾಸಿ ಸ್ಥಳಗಳು


Responsive Services Section