ಸರ್ ಎಂ. ವಿಶ್ವೇಶ್ವರಯ್ಯ ಅವರು ಜನಿಸಿ ಬೆಳೆದು ಬಂದ ಊರು ಮುದ್ದೇನಹಳ್ಳಿ, ಇದು ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದೆ. ಮುದ್ದೇನಹಳ್ಳಿ ಇಂದು ಸರ್ ಎಂ. ವಿಶ್ವೇಶ್ವರಯ್ಯ ಅವರ ಸ್ಮಾರಕವಾಗಿ ಅಭಿವೃದ್ಧಿಗೊಂಡಿದ್ದು, ಅವರ ಕುಟುಂಬದ ಒಡೆತನದ ಜಮೀನಿನಲ್ಲಿ ಇದೆ. ಅವರು ಜನಿಸಿದ ಮನೆಯನ್ನು, ನಂದಿ ಬೆಟ್ಟಗಳ ಸುಂದರ ಹಿನ್ನೆಲೆಯೊಂದಿಗೆ, ಒಂದು ವಸ್ತುಸಂಗ್ರಹಾಲಯವಾಗಿ ಪರಿವರ್ತಿಸಲಾಗಿದೆ.
ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕ ದೂರಗಳು
- ಬೆಂಗಳೂರು – 57 ಕಿ.ಮೀ
- ಚಿಕ್ಕಬಳ್ಳಾಪುರ – 6 ಕಿ.ಮೀ
- ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣ – 7 ಕಿ.ಮೀ
ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಭಾರತದ ಅಗ್ರಗಣ್ಯ ಹಾಗೂ ಮಹಾನ್ ಇಂಜಿನಿಯರ್ಗಳಲ್ಲಿ ಒಬ್ಬರು. ಅವರ ಜನ್ಮದಿನವಾದ ಸೆಪ್ಟೆಂಬರ್ 15 ಅನ್ನು ಭಾರತದಲ್ಲಿ ಪ್ರತಿವರ್ಷ ಇಂಜಿನಿಯರ್ ದಿನವಾಗಿ ಆಚರಿಸಲಾಗುತ್ತದೆ.
ಸರ್ ಎಂ.ವಿಶ್ವೇಶ್ವರಯ್ಯ ರವರ ಬಗ್ಗೆ ಮಾಹಿತಿ
ವಿಶ್ವೇಶ್ವರಯ್ಯನವರು 1860ರ ಸೆಪ್ಟೆಂಬರ್ 15ರಂದು ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿ ಜನಿಸಿದರು. ವಿಶ್ವೇಶ್ವರಯ್ಯನವರ ತಂದೆ ಶ್ರೀನಿವಾಸ ಶಾಸ್ತ್ರಿ ಮತ್ತು ತಾಯಿ ವೆಂಕಟಲಕ್ಷ್ಮಮ್ಮ. ಅವರ ಪೂರ್ವಜರು ಇಂದಿನ ಆಂಧ್ರಪ್ರದೇಶದ ಮೋಕ್ಷಗುಂಡಂ ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದರಿಂದ, ಅವರ ಹೆಸರಿಗೆ ಮೋಕ್ಷಗುಂಡಂ ಎಂಬ ಪದ ಸೇರಿಕೊಂಡಿತು.
ವಿಶ್ವೇಶ್ವರಯ್ಯನವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚಿಕ್ಕಬಳ್ಳಾಪುರದಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪೂರ್ಣಗೊಳಿಸಿದರು. 1881ರಲ್ಲಿ ಮದ್ರಾಸ್ ವಿಶ್ವವಿದ್ಯಾಲಯದಿಂದ ಬಿ.ಎ. ಪದವಿಯನ್ನು ಪಡೆದು, ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು.
ವಿಶ್ವೇಶ್ವರಯ್ಯನವರು ನಂತರ ಮೈಸೂರಿನ ದಿವಾನರಾಗಿ ನೇಮಕಗೊಂಡರು. ಮೈಸೂರು ಕೃಷ್ಣರಾಜ ಸಾಗರ (KRS) ಅಣೆಕಟ್ಟಿನ ನಿರ್ಮಾಣದಲ್ಲಿ ಅವರು ಮುಖ್ಯ ಎಂಜಿನಿಯರ್ ಆಗಿ ಮಹತ್ವದ ಪಾತ್ರ ವಹಿಸಿದರು. ಅವರ ಆಡಳಿತಾವಧಿಯಲ್ಲಿ ಮೈಸೂರು ರಾಜ್ಯವು ಕೃಷಿ, ನೀರಾವರಿ, ಕೈಗಾರಿಕೀಕರಣ, ಶಿಕ್ಷಣ, ಬ್ಯಾಂಕಿಂಗ್ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಮಹತ್ತರ ಪ್ರಗತಿಯನ್ನು ಕಂಡಿತು.
ಭೇಟಿ ನೀಡಿ
ಭೇಟಿ ನೀಡಿ

















